ಡಿಎಂಕೆ ಜೊತೆಗೆ ಕಾಂಗ್ರೆಸ್ ಒಳ ಒಪ್ಪಂದ ಫಲವಾಗಿ ಕಾವೇರಿ ನೀರು ತಮಿಳುನಾಡಿಗೆ- ಯತ್ನಾಳ ಆರೋಪ

Cauvery Water Issue: ಲೋಕಸಭಾ ಚುಣಾವಣೆಗಾಗಿ ಕಾಂಗ್ರೆಸ್ ಕರ್ನಾಟಕ ಜನತೆಗೆ ಮೋಸ ಮಾಡುತ್ತಿದ್ದು, ಕರ್ನಾಟಕವನ್ನ ಬಲಿ ಕೊಡತಾ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ದ್ರೋಹ ಮಾಡಿದೆ ಇದು ಸರಿಯಲ್ಲ.

Written by - Yashaswini V | Last Updated : Sep 21, 2023, 02:50 PM IST
  • ಕಾಂಗ್ರೆಸ್ ನವರದ್ದು ಡಿ.ಎಮ್.ಕೆ ಜೊತೆ ಒಳ ಒಪ್ಪಂದ ಇದೆ.
  • ಮೊದಲಿನಿಂದಲೂ ಡಿಎಂಕೆ ಜೊತೆ ಅನ್ಯೋನ್ಯವಾಗಿರುವ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆ ಸಲುವಾಗಿ ತಮಿಳುನಾಡಿನಿಗೆ ಕಾವೇರಿ ನೀರನ್ನು ಹರಿಸುತ್ತಿದೆ- ಶಾಸಕ ಯತ್ನಾಳ್ ಆರೋಪ
ಡಿಎಂಕೆ ಜೊತೆಗೆ ಕಾಂಗ್ರೆಸ್ ಒಳ ಒಪ್ಪಂದ ಫಲವಾಗಿ ಕಾವೇರಿ ನೀರು ತಮಿಳುನಾಡಿಗೆ- ಯತ್ನಾಳ ಆರೋಪ title=

Cauvery Water Issue: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ರೀತಿಯ ರೈತರ ಬಗ್ಗೆ ಕಾಳಜಿ ಇಲ್ಲ. ಕೇವಲ ಸ್ವ ಹಿತಾಸಕ್ತಿಗೋಸ್ಕರ ರಾಜ್ಯವನ್ನು ಬಲಿಕೊಡಲಾಗುತ್ತಿದೆ.  ಡಿಎಂಕೆ ಜೊತೆಗೆ ಕಾಂಗ್ರೆಸ್ ಒಳ ಒಪ್ಪಂದ ಫಲವಾಗಿ ಕಾವೇರಿ ನೀರು ತಮಿಳುನಾಡಿಗೆ ಬಿಡಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗಂಭೀರ ಸ್ವರೂಪದ ಆರೋಪ ಮಾಡಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಕಾಂಗ್ರೆಸ್ ನವರದ್ದು ಡಿ.ಎಮ್.ಕೆ ಜೊತೆ ಒಳ ಒಪ್ಪಂದ ಇದೆ. ಮೊದಲಿನಿಂದಲೂ ಡಿಎಂಕೆ ಜೊತೆ ಅನ್ಯೋನ್ಯವಾಗಿರುವ ಕಾಂಗ್ರೆಸ್  ಮುಂದಿನ ಲೋಕಸಭಾ ಚುನಾವಣೆ  ಸಲುವಾಗಿ ತಮಿಳುನಾಡಿನಿಗೆ ಕಾವೇರಿ ನೀರನ್ನು ಹರಿಸುತ್ತಿದೆ ಎಂದು ಆರೋಪಿಸಿದರು. 

ಇದನ್ನೂ ಓದಿ- ಕಾವೇರಿ ವಿವಾದ: ಕೇಂದ್ರ ಸರಕಾರ ಪರಿಣತರ ತಂಡ ಕಳಿಸಲಿ: ಸಚಿವ ಎಂ.ಬಿ. ಪಾಟೀಲ

ಲೋಕಸಭಾ ಚುಣಾವಣೆಗಾಗಿ ಕಾಂಗ್ರೆಸ್ ಕರ್ನಾಟಕ ಜನತೆಗೆ ಮೋಸ ಮಾಡುತ್ತಿದ್ದು, ಕರ್ನಾಟಕವನ್ನ ಬಲಿ ಕೊಡತಾ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನತೆಗೆ ದ್ರೋಹ ಮಾಡಿದೆ ಇದು ಸರಿಯಲ್ಲ. ನಮಲ್ಲಿ ದಟ್ಟವಾದ ಬರಗಾಲ ಇದೆ ಇಂತಹ ಸಂದರ್ಭದಲ್ಲಿ ನೀರು ಬಿಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು. 

ಇದನ್ನೂ ಓದಿ- ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ: ಮುಖ್ಯಮಂತ್ರಿ

ಇದೇ ವೇಳೆ ಸುಪ್ರೀಂ ಕೋರ್ಟ್ ನಲ್ಲಿ ಸರಿಯಾಗಿ ರಾಜ್ಯ ಸರ್ಕಾರ ವಾದ ಮಾಡಿಲ್ಲ ಎಂದು ಆರೋಪಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೂಡಲೇ ವಿಧಾನ ಸಭೆ ವಿಸರ್ಜನೆ ಮಾಡಬೇಕು ಎಂದು ಒತ್ತಾಯ ಮಾಡಿದರು. 

ಕರ್ನಾಟಕದ ರೈತರು ಆತ್ಮಹತ್ಯೆ ದಾರಿ ಹಿಡಿಯಲು ಕಾಂಗ್ರೆಸ್ ಸರಕಾರ ಕಾರಣ,  ಸಮರ್ಥವಾಗಿ ವಾದ ಏಕೆ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿರುವ ಅವರು ರಾಜಕೀಯ ಸಲುವಾಗಿ ಜನರ ಮಾರಣ ಹೋಮ ಆಗುತ್ತಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲ ಸಲ್ಲದ ಹೇಳಿಕೆಯನ್ನು  ಕೊಡ್ತಾ ಇದ್ದಾರೆ ಎಂದು ಕಿಡಿಕಾರಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News