Republic day Parade Karnataka Tableau: ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
India-Maldives Relations: ಈ ತಿಂಗಳ ಆರಂಭದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ದ್ವೀಪ ಪ್ರದೇಶದಲ್ಲಿ ಹಲವಾರು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಮೋದಿಯವರು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಕುರಿತು ಮಾಲ್ಡೀವ್ಸ್ ಸಚಿವರು ಆಕ್ಷೇಪಾರ್ಯವಾಗಿ ಟ್ವೀಟ್ ಮಾಡಿದ್ದಾರೆ.
PM Narendra Modi visit Lakshadweep : ಲಕ್ಷದ್ವೀಪಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ, ಅಲ್ಲಿ ಅವರು ಪ್ರಕೃತಿ ಸೌಂದರ್ಯವನ್ನು ಸವಿಯುತ್ತಾ.. ಸಮುದ್ರದ ದಡದಲ್ಲಿ ಕುಳಿತು ವಿಶ್ರಾಂತಿ ಪಡೆದರು. ಅಲ್ಲದೆ, ಸಮುದ್ರದಲ್ಲಿ ಸ್ನಾರ್ಕ್ಲಿಂಗ್ ಮಾಡಿ, ಸಾಗರದಾಳದಲ್ಲಿನ ಜೀವಿಗಳನ್ನು ಕಣ್ತುಂಬಿಕೊಂಡರು. ಈ ಕುರಿತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆಯನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿದ್ದಾರೆ. ಇದಕ್ಕೂ ಮುನ್ನ ಅರುಣ್ ಯೋಗಿರಾಜ್ ಅವರು ದೇಶದ ಹಲವು ಪ್ರಮುಖ ಸ್ಥಳಗಳು ಮತ್ತು ದೇವಾಲಯಗಳಿಗೆ ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಕೂಡ ಯೋಗಿರಾಜ್ ಭೇಟಿ ಮಾಡಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
Karnataka Drought Relief: ಬಿಜೆಪಿಯ 25 ಸಂಸದರು ಬರ ಪರಿಹಾರ ಬಿಡುಗಡೆ ಮಾಡುವಂತೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಕೆಲಸ ಮಾಡಿಲ್ಲವೇಕೆ? ಬಿಜೆಪಿಗರಿಗೆ ಕನ್ನಡಿಗರ ಮತ ಮಾತ್ರ ಬೇಕು, ಕನ್ನಡಿಗರ ಹಿತ ಬೇಡವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, "ಪ್ರತಿಯೊಂದು ಔಷಧಿಗೂ ಎಕ್ಸ್ಪೈರಿ ಡೇಟ್ ಇರುತ್ತದೆ. ಅದೇ ರೀತಿ ನರೇಂದ್ರ ಮೋದಿಯವರ ಔಷಧಿ ಇನ್ನು ಮುಂದೆ ದೇಶದಲ್ಲಿ ಕೆಲಸ ಮಾಡುವುದಿಲ್ಲ" ಎಂದು ಟೀಕಿಸಿದರು.
India under Modi regime : ಭಾರತದ ಪ್ರಧಾನಿ ನರೇಂದ್ರ ಮೋದಿಯವರು ವಾಸಿಸುವ ನವದೆಹಲಿಯ ಅಧಿಕೃತ ನಿವಾಸದ ರಸ್ತೆಯನ್ನು ಈ ಮೊದಲು ರೇಸ್ ಕೋರ್ಸ್ ರಸ್ತೆ ಎಂದು ಕರೆಯಲಾಗಿತ್ತಿತ್ತು. ಆದರೆ 2016ರಲ್ಲಿ ಇದನ್ನು ಲೋಕ್ ಕಲ್ಯಾಣ್ ಮಾರ್ಗ ಎಂದು ಮರುನಾಮಕರಣ ಮಾಡಲಾಯಿತು. ಈ ಹೊಸ ಹೆಸರು ಮೋದಿಯವರ ಜನಪರವಾದ ಕಾರ್ಯವಿಧಾನ ಮತ್ತು ಭಾರತದ ವಸಾಹತುಶಾಹಿ ಇತಿಹಾಸವನ್ನು ತೊಡೆಯುವ ಪ್ರಯತ್ನವನ್ನು ಪ್ರತಿನಿಧಿಸುತ್ತದೆ.
BJP-JD(S) alliance: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಸೀಟು ಹಂಚಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಶೀಘ್ರವೇ ಸೀಟು ಹಂಚಿಕೆ ಅಂತಿಮಗೊಳಿಸಲಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
CM Siddaramaiah: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು.
Global Approval Rating: ಡಿಸೆಂಬರ್ 7ರಂದು ಅಮೆರಿಕ ಮೂಲದ ಸಲಹಾ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಪ್ರಧಾನಿ ಮೋದಿಯವರು ಶೇ.76ರ ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
PM Modi On Deepfake Video: ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೃತಕ ಬುದ್ಧಿಮತ್ತೆಯ ಸಂಯೋಜನೆಯೊಂದಿಗೆ, ಇದು ಸಮಾಜಕ್ಕೆ ದೊಡ್ಡ ಬಿಕ್ಕಟ್ಟನ್ನು ಉಂಟುಮಾಡಬಹುದು. (Technology News In Kannada)
PM Modi Special Message to Shami:ಶಮಿಯ ಈ ಅದ್ಭುತ ಆಟಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡಾ ತಲೆ ಬಾಗಿದ್ದಾರೆ. ಶಮಿ ಆಟವನ್ನು ಮೆಚ್ಚಿದ ನರೇಂದ್ರ ಮೋದಿ ಅವರಿಗೆ ವಿಶೇಷ ಸಂದೇಶ ನೀಡಿದ್ದಾರೆ.
PM Narendra modi : ದೇಶದಾದ್ಯಂತ ಬೆಳಕಿನ ಹಬ್ಬವನ್ನು ಜನರು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಪ್ರಧಾನಿ ನರೇಂದ್ರ ಮೋದಿ ದೇಶದ ಹೆಮ್ಮೆಯ ಸೈನಿಕರ ಜೊತೆ ದೀಪಾವಳಿ ಹಬ್ಬವನ್ನು ಅಚರಿಸಿದ್ದಾರೆ. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
Five State Assembly Elections 2023: ಪಡಿತರ ಚೀಟಿದಾರರಿಗೆ ಒಂದು ಗುಡ್ ನ್ಯೂಸ್ ಪ್ರಕಟಗೊಂಡಿದೆ. ಪಡಿತರ ಚೀಟಿ ಧಾರಕರಿಗೆ ಈಗಾಗಲೇ ಗೋಧಿ, ಅಕ್ಕಿ, ಬೇಳೆಕಾಳುಗಳನ್ನು ನೀಡಲಾಗುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಆದರೆ ಈಗ ಅದರೊಂದಿಗೆ ಸಾಸಿವೆ ಎಣ್ಣೆ, ಸಕ್ಕರೆಯನ್ನೂ ನೀಡಲಾಗುವುದು ಎಂದಿದ್ದಾರೆ. ಬಿಜೆಪಿಯಿಂದ ಈ ಅನುಕೂಲ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ. (Political News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.