R.Ashok Statement: ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
Jagadish Shettar Returns To BJP : ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದರು.
ದೇಶದ ಎಲ್ಲ ಸಮುದಾಯಗಳು ಶ್ರೀರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾಯುತ್ತಿವೆ. ಆದರೆ ರಾಮಮಂದಿರದ ಕಾರ್ಯಕ್ರಮಕ್ಕೆ ಹೋಗದಿರುವುದು ಕಾಂಗ್ರೆಸ್ನ ದುರ್ಬುದ್ಧಿ ಹಾಗೂ ಕುತಂತ್ರ ರಾಜಕಾರಣ. ಅವರಿಗೆ ಶ್ರೀರಾಮನೇ ಬುದ್ದಿ ಕಲಿಸುತ್ತಾನೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಜೈ ಶ್ರೀರಾಮ್ ಎಂದರೆ ಜೈಲಿಗೆ ಹಾಕುತ್ತಾರೆ, ಜೈ ಟಿಪ್ಪು ಎಂದರೆ ಬಿಡುಗಡೆಗೊಳಿಸುತ್ತಾರೆ. ರಾಮಭಕ್ತರನ್ನು ವಿರೋಧಿಸಿದರೆ ಹಾಗೂ ಟಿಪ್ಪು ಸಂಸ್ಕೃತಿಯನ್ನು ವಿಜೃಂಭಿಸಿದರೆ ಕಾಂಗ್ರೆಸ್ ಸರ್ಕಾರ ಬಹಳ ಕಾಲ ಉಳಿಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
ಹಿಂದೆ ಟಿಪ್ಪು ಸುಲ್ತಾನ ಹಿಂದೂ ಮುಸ್ಲಿಮರನ್ನು ಬೇರೆ ಮಾಡಿದಂತೆ ಸಿಎಂ ಸಿದ್ದರಾಮಯ್ಯನವರು ಈಗ ಮಾಡುತ್ತಿದ್ದಾರೆ. ಮುಸ್ಲಿಮರ ಕಾಲೋನಿ ಬೇರೆ, ಹಿಂದೂಗಳ ಪ್ರದೇಶ ಬೇರೆ ಎಂದು ವರ್ಗೀಕರಣ ಮಾಡಿ ಸಂವಿಧಾನಕ್ಕೆ ಅಪಚಾರವಸೆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕುವ ಬದಲು ಕನ್ನಡಿಗರ ತಲೆಯ ಮೇಲೆ ಕಲ್ಲು ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರಕಾರವು ಡಿಕೆ ಶಿವಕುಮಾರ್ ಅವರು ಆದಾಯ ಮೀರಿದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಗಳ ಮೇರೆಗೆ 2019 ರ ಸೆಪ್ಟೆಂಬರ್25 ರಂದು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಒಮ್ಮೆ ತನಿಖೆಗೆ ನೀಡಿದ್ದ ಪ್ರಕರಣವನ್ನು ಹಿಂದೆ ಪಡೆಯಲು ಬರುವುದಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಪಾದಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.